ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತ ಆಗಿ ಪರಿವರ್ತನೆ ಆಗಲಿದ್ದು, ಮುಂದಿನ 24 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೇ 8 ರ ವೇಳೆಗೆ ಚಂಡಮಾರುತವಾಗಿ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆಯು ಶನಿವಾರ ಮುನ್ನೆಚ್ಚರಿಕೆ ನೀಡಿತ್ತು. ಭಾನುವಾರ ಇನ್ನಷ್ಟು ಬಲಗೊಂಡ ಚಂಡಮಾರುತವು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ. ಚಂಡಮಾರುತದ ವೇಗ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿದಡೆಯೂ ಮಳೆಯಾಗುವ ಸಾಧ್ಯತೆ ಇದೆ. ಈ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ.
ನಿರೀಕ್ಷಿತ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ. ಶ್ರೀಲಂಕಾ ಚಂಡಮಾರುತಕ್ಕೆ ಹೆಸರಿಟ್ಟಿದ್ದು, ಸಿಂಹಳಿ ಭಾಷೆಯಲ್ಲಿ ಅಸಾನಿ ಎಂದ್ರೆ ಕ್ರೋಧ ಎಂದರ್ಥ. ಮೇ 9 ಮತ್ತು 10 ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಳೆ ಗಂಟೆಗೆ 80 ರಿಂದ 90 ಕಿಲೋ ಮೀಟರ್ ಇರಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಚಂಡಮಾರುತವು ವಿಶಾಖಪಟ್ಟಣಂನ ಆಗ್ನೇಯಕ್ಕೆ ಸುಮಾರು 900 ಕಿಮೀ ದೂರದಲ್ಲಿದೆ.
ಚಂಡಮಾರುತದಿಂದ ಯಾವುದೇ ತುರ್ತು ಪರಿಸ್ಥಿತಿ ಉಂಟಾದರೆ ಒಡಿಶಾದ 18 ಜಿಲ್ಲೆಗಳಲ್ಲಿ 7.5 ಲಕ್ಷ ಜನರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಒಡಿಶಾ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಜೆನಾ ಹೇಳಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…