Advertisement
ಸುದ್ದಿಗಳು

#CycloneBiparjoy | ಗುಜರಾತಲ್ಲಿ ಚಂಡಮಾರುತದ ಅಬ್ಬರ | 24 ಗಂಟೆಯೊಳಗೆ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಮರುಸ್ಥಾಪನೆ |

Share

 ಬಿಪರ್‌ ಜಾಯ್‌ ಚಂಡಮಾರುತ ಗುಜರಾತ್‌ ಕರಾವಳಿ ಪ್ರದೇಶದಲ್ಲಿ  ಅಪ್ಪಳಿಸಿತು. ಗುಜರಾತಿನ ಕಚ್-ಸೌರಾಷ್ಟ್ರ ಪ್ರದೇಶದಲ್ಲಿ  ಅಪ್ಪಳಿಸಿದ ಬಿಪರ್‌ ಜಾಯ್‌ ಚಂಡಮಾರುತವು ಹಲವು ಹಾನಿಯನ್ನುಂಟು ಮಾಡಿತ್ತು. ಚಂಡಮಾರುತದ ಕಾರಣದಿಂದ 4,600 ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. 24 ಗಂಟೆಯಲ್ಲಿ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ, ಇನ್ನೂ 1,000 ಹಳ್ಳಿಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.

ಗುಜರಾತಲ್ಲಿ ಈಗ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಮಳೆ ಹಾಗೂ ಗಾಳಿಯ ಪ್ರಭಾವ ತಗ್ಗಿದೆ. ಗುಜರಾತಿನ ಕಚ್-ಸೌರಾಷ್ಟ್ರ ಪ್ರದೇಶಕ್ಕೆ ಅಪ್ಪಳಿಸಿದ ಬಿಪರ್‌ ಜಾಯ್‌ ಚಂಡಮಾರುತದ ಕಾರಣದಿಂದ  ಅಧಿಕೃತವಾಗಿ 5,120 ವಿದ್ಯುತ್ ಕಂಬಗಳನ್ನು ಹಾನಿಗೊಳಿಸಿತ್ತು  ಹಾಗೂ 4,600 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಚಂಡಮಾರುತದ ಕಾರಣದಿಂದ  34 ಜನರು ಗಾಯಗೊಂಡಿದ್ದಾರೆ ಮತ್ತು 94 ಪ್ರಾಣಿಗಳು ಮೃತಪಟ್ಟಿದ್ದವು. ಇಲಾಖೆಗಳ ಮುನ್ಸೂಚನೆಯ ಕಾರಣದಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಚಂಡಮಾರುತದ ಕಾರಣದಿಂದ  ಮರಗಳು ಧರೆಗೆ ಉರುಳಿದ್ದವು, ವಿದ್ಯುತ್ ಮತ್ತು ಪ್ರಸರಣ ಕಂಬಗಳು ಮತ್ತು  ಮನೆಗಳು ಕೂಡಾ ಧರೆಗೆ ಉರುಳಿತ್ತು. ವಿದ್ಯುತ್‌ ಕಂಬಗಳು ಉರುಳಿದ ಕಾರಣದಿಂದ 4600 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಗುಜರಾತ್‌ನ ಜಾಮ್‌ನಗರ ಸೇರಿದಂತೆ ವಿವಿದೆಡೆ ಅಧಿಕಾರಿಗಳ ತಂಡ ಸತತ ಕೆಲಸ ಮಾಡುತ್ತಿದ್ದು,  ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಪಿಜಿವಿಸಿಎಲ್‌ನ 119 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ, ಇನ್ನೂ 1,000 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಇನ್ನೂ ವಿದ್ಯುತ್ ಸ್ಥಾಪಿಸಲು ಸಾಧ್ಯವಾಗಿಲ್ಲ.

ಗುಜರಾತ್‌ನ ನಂತರ ಚಂಡಮಾರುತವು  ರಾಜಸ್ಥಾನದ ಜಲೋರ್ ಮತ್ತು ಬಾರ್ಮರ್ ಜಿಲ್ಲೆಗಳ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

3 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

5 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

10 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

11 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

18 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

19 hours ago