Advertisement
ಸುದ್ದಿಗಳು

#CycloneBiparjoy | ಗುಜರಾತಲ್ಲಿ ಚಂಡಮಾರುತದ ಅಬ್ಬರ | 24 ಗಂಟೆಯೊಳಗೆ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಮರುಸ್ಥಾಪನೆ |

Share

 ಬಿಪರ್‌ ಜಾಯ್‌ ಚಂಡಮಾರುತ ಗುಜರಾತ್‌ ಕರಾವಳಿ ಪ್ರದೇಶದಲ್ಲಿ  ಅಪ್ಪಳಿಸಿತು. ಗುಜರಾತಿನ ಕಚ್-ಸೌರಾಷ್ಟ್ರ ಪ್ರದೇಶದಲ್ಲಿ  ಅಪ್ಪಳಿಸಿದ ಬಿಪರ್‌ ಜಾಯ್‌ ಚಂಡಮಾರುತವು ಹಲವು ಹಾನಿಯನ್ನುಂಟು ಮಾಡಿತ್ತು. ಚಂಡಮಾರುತದ ಕಾರಣದಿಂದ 4,600 ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. 24 ಗಂಟೆಯಲ್ಲಿ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ, ಇನ್ನೂ 1,000 ಹಳ್ಳಿಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.

Advertisement
Advertisement

ಗುಜರಾತಲ್ಲಿ ಈಗ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಮಳೆ ಹಾಗೂ ಗಾಳಿಯ ಪ್ರಭಾವ ತಗ್ಗಿದೆ. ಗುಜರಾತಿನ ಕಚ್-ಸೌರಾಷ್ಟ್ರ ಪ್ರದೇಶಕ್ಕೆ ಅಪ್ಪಳಿಸಿದ ಬಿಪರ್‌ ಜಾಯ್‌ ಚಂಡಮಾರುತದ ಕಾರಣದಿಂದ  ಅಧಿಕೃತವಾಗಿ 5,120 ವಿದ್ಯುತ್ ಕಂಬಗಳನ್ನು ಹಾನಿಗೊಳಿಸಿತ್ತು  ಹಾಗೂ 4,600 ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಚಂಡಮಾರುತದ ಕಾರಣದಿಂದ  34 ಜನರು ಗಾಯಗೊಂಡಿದ್ದಾರೆ ಮತ್ತು 94 ಪ್ರಾಣಿಗಳು ಮೃತಪಟ್ಟಿದ್ದವು. ಇಲಾಖೆಗಳ ಮುನ್ಸೂಚನೆಯ ಕಾರಣದಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

Advertisement

ಚಂಡಮಾರುತದ ಕಾರಣದಿಂದ  ಮರಗಳು ಧರೆಗೆ ಉರುಳಿದ್ದವು, ವಿದ್ಯುತ್ ಮತ್ತು ಪ್ರಸರಣ ಕಂಬಗಳು ಮತ್ತು  ಮನೆಗಳು ಕೂಡಾ ಧರೆಗೆ ಉರುಳಿತ್ತು. ವಿದ್ಯುತ್‌ ಕಂಬಗಳು ಉರುಳಿದ ಕಾರಣದಿಂದ 4600 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಗುಜರಾತ್‌ನ ಜಾಮ್‌ನಗರ ಸೇರಿದಂತೆ ವಿವಿದೆಡೆ ಅಧಿಕಾರಿಗಳ ತಂಡ ಸತತ ಕೆಲಸ ಮಾಡುತ್ತಿದ್ದು,  ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಪಿಜಿವಿಸಿಎಲ್‌ನ 119 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ 3,580 ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ, ಇನ್ನೂ 1,000 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಇನ್ನೂ ವಿದ್ಯುತ್ ಸ್ಥಾಪಿಸಲು ಸಾಧ್ಯವಾಗಿಲ್ಲ.

Advertisement

ಗುಜರಾತ್‌ನ ನಂತರ ಚಂಡಮಾರುತವು  ರಾಜಸ್ಥಾನದ ಜಲೋರ್ ಮತ್ತು ಬಾರ್ಮರ್ ಜಿಲ್ಲೆಗಳ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago