ಬಿಪರ್ ಜೋಯ್ ಚಂಡಮಾರುತವು ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ 10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…