ಬಿಪರ್ ಜೋಯ್ ಚಂಡಮಾರುತವು ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ 10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…