ಬಿಪರ್ ಜೋಯ್ ಚಂಡಮಾರುತವು ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ 10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…