ಬಿಪರ್ ಜೋಯ್ ಚಂಡಮಾರುತವು ಗುಜರಾತ್ ಕರಾವಳಿ ಸಮೀಪಿಸಿದ್ದು, ಭಾರೀ ಮಳೆ ಹಾಗೂ ಗಾಳಿಯ ಜೊತೆಗೆ ಮಾಂಡ್ವಿ ಮತ್ತು ಕರಾಚಿ ನಡುವೆ ಜಖೌ ಬಂದರಿನ ಬಳಿ ಅಪ್ಪಳಿಸಲು ಆರಂಭವಾಗಿದೆ. ಸಂಜೆ 4-8 ಗಂಟೆಯ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.ಅತ್ಯಂತ ತೀವ್ರವಾದ ಚಂಡಮಾರುತವು ಗುಜರಾತ್ನ ಜಖೌ ಬಂದರಿನಿಂದ 70 ಕಿಲೋಮೀಟರ್ ದೂರದಲ್ಲಿದೆ. ಸೌರಾಷ್ಟ್ರ ಮತ್ತು ಕಛ್ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ.
ಚಂಡಮಾರುತವು ಗುಜರಾತ್ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯನ್ನು ಉಂಟು ಮಾಡುತ್ತಿದೆ. ಚಂಡಮಾರುತದ ಪ್ರಭಾವ ಹೊಂದಿರುವ ಗುಜರಾತ್ ಪ್ರದೇಶದ 94,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಪಾಕಿಸ್ತಾನವು ಸಿಂಧ್ನಿಂದ ಇದುವರೆಗೆ ಸುಮಾರು 77,000 ಜನರನ್ನು ಸ್ಥಳಾಂತರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
“ಅತ್ಯಂತ ತೀವ್ರವಾದ ಚಂಡಮಾರುತ” ಇದಾಗಿದ್ದು, ಗರಿಷ್ಠ ಗಾಳಿಯ ವೇಗ ಗಂಟೆಗೆ 150 ಕಿಲೋಮೀಟರ್ ವರೆಗೆ ತಲುಪುತ್ತದೆ. ಗುಜರಾತ್ ಆಡಳಿತವು ಕಚ್ ಜಿಲ್ಲೆಯ ಕಡಲತೀರದಿಂದ 10 ಕಿಮೀ ನಡುವಿನ ಸುಮಾರು 120 ಹಳ್ಳಿಗಳಿಂದ ಜನರನ್ನು ಸ್ಥಳಾಂತರಿಸಿದೆ. ಸೇನೆ, ನೌಕಾಪಡೆ ಮತ್ತು ಐಎಎಫ್ ತಂಡಗಳು ಪರಿಹಾರ ಕಾರ್ಯಾಚರಣೆಗೆ ಸನ್ನದ್ಧವಾಗಿವೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…