#CycloneBiparjoy | ಗುಜರಾತಲ್ಲಿ ಅಪ್ಪಳಿಸಿದ ಚಂಡಮಾರುತ | ಚಂಡಮಾರುತಕ್ಕೆ 25 ಕ್ಕೂ ಅಧಿಕ ಮಂದಿಗೆ ಗಾಯ | 30 ಕ್ಕೂ ಅಧಿಕ ಪ್ರಾಣಿಗಳ ಸಾವು | 900+ ಗ್ರಾಮಗಳು ಕತ್ತಲಲ್ಲಿ |

June 16, 2023
9:54 AM

ಚಂಡಮಾರುತ ಬಿಪೋರ್‌ ಜಾಯ್‌ ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಅಪ್ಪಳಿಸಿದೆ. ನಿನ್ನೆ ಸಂಜೆಯಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ಭಾರೀ ಗಾಳಿ ಮಳೆಗೆ 5 ಮಂದಿ ಬಲಿಯಾಗಿದ್ದಾರೆ ಎಂದು  ಮಾಧ್ಯಮಗಳು ವರದಿ ಮಾಡಿವೆ. ಇದುವರೆಗೆ ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಚಂಡಮಾರುತದ ಕಾರಣದಿಂದ 22 ಮಂದಿ ಗಾಯಗೊಂಡಿದ್ದಾರೆ. 30 ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ. 900 ಕ್ಕೂ ಅಧಿಕ ಹಳ್ಳಿಗಳು ಕತ್ತಲಲ್ಲಿವೆ. ಭಾರೀ ಗಾಳಿಯ ಕಾರಣದಿಂದ ಮರಗಳು ಉರುಳಿ ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಗುಜರಾತಿನ ವಿವಿಧ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ  ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

Advertisement
Advertisement

ಗುರುವಾರ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತವು ಅಪ್ಪಳಿಸಿದ ನಂತರ  ‘ಅತಿ ತೀವ್ರ’ ದಿಂದ ‘ತೀವ್ರ’ ಪ್ರಮಾಣಕ್ಕೆ ಇಳಿಕೆಯಾಗಿದೆ. ತನ್ನ ಪ್ರಭಾವ ತಗ್ಗಿಸಿದ ಚಂಡಮಾರುತವು  ರಾಜಸ್ಥಾನಕ್ಕೆ ಚಂಡಮಾರುತ ಅಪ್ಪಳಿಸಲಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 12 ತಂಡಗಳನ್ನು ನಿಯೋಜಿಸಿದ್ದು, ಮೂರು ಹೆಚ್ಚುವರಿ ತಂಡಗಳನ್ನು ಗುಜರಾತ್‌ನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಹೆಚ್ಚುವರಿಯಾಗಿ, 15 ತಂಡಗಳು ಅರ್ರಕೋಣಂ (ತಮಿಳುನಾಡು), ಮುಂಡ್ಲಿ (ಒಡಿಶಾ) ಮತ್ತು ಬಟಿಂಡಾ (ಪಂಜಾಬ್) ನಲ್ಲಿ ತಲಾ ಐದು ತಂಡಗಳನ್ನು ಅಲ್ಪಾವಧಿಯಲ್ಲಿ ಏರ್‌ಲಿಫ್ಟಿಂಗ್‌ಗಾಗಿ ಎಚ್ಚರಿಕೆ ವಹಿಸಲಾಗಿದೆ. ಕೋಸ್ಟ್ ಗಾರ್ಡ್, ಸೇನೆ ಮತ್ತು ನೌಕಾಪಡೆಯ ರಕ್ಷಣಾ ಮತ್ತು ಪರಿಹಾರ ತಂಡಗಳು ಹಡಗುಗಳು ಮತ್ತು ವಿಮಾನಗಳೊಂದಿಗೆ  ಸಿದ್ಧವಾಗಿವೆ.

ಕಳೆದ ಕೆಲವು ದಿನಗಳಲ್ಲಿ ಚಂಡಮಾರುತ ಬಿಪರ್‌ ಜಾಯ್‌ ಕಾರಣದಿಂದ   ಭಾರತ ಮತ್ತು ಪಾಕಿಸ್ತಾನದಲ್ಲಿ 1,80,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ
July 26, 2025
7:38 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ
July 26, 2025
7:27 AM
by: ದಿವ್ಯ ಮಹೇಶ್
ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ
July 25, 2025
11:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group