MIRROR FOCUS

#CycloneBiparjoy | ಗುಜರಾತಲ್ಲಿ ಅಪ್ಪಳಿಸಿದ ಚಂಡಮಾರುತ | ಚಂಡಮಾರುತಕ್ಕೆ 25 ಕ್ಕೂ ಅಧಿಕ ಮಂದಿಗೆ ಗಾಯ | 30 ಕ್ಕೂ ಅಧಿಕ ಪ್ರಾಣಿಗಳ ಸಾವು | 900+ ಗ್ರಾಮಗಳು ಕತ್ತಲಲ್ಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂಡಮಾರುತ ಬಿಪೋರ್‌ ಜಾಯ್‌ ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಅಪ್ಪಳಿಸಿದೆ. ನಿನ್ನೆ ಸಂಜೆಯಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ಭಾರೀ ಗಾಳಿ ಮಳೆಗೆ 5 ಮಂದಿ ಬಲಿಯಾಗಿದ್ದಾರೆ ಎಂದು  ಮಾಧ್ಯಮಗಳು ವರದಿ ಮಾಡಿವೆ. ಇದುವರೆಗೆ ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಚಂಡಮಾರುತದ ಕಾರಣದಿಂದ 22 ಮಂದಿ ಗಾಯಗೊಂಡಿದ್ದಾರೆ. 30 ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ. 900 ಕ್ಕೂ ಅಧಿಕ ಹಳ್ಳಿಗಳು ಕತ್ತಲಲ್ಲಿವೆ. ಭಾರೀ ಗಾಳಿಯ ಕಾರಣದಿಂದ ಮರಗಳು ಉರುಳಿ ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಗುಜರಾತಿನ ವಿವಿಧ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ  ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

Advertisement
Advertisement

ಗುರುವಾರ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತವು ಅಪ್ಪಳಿಸಿದ ನಂತರ  ‘ಅತಿ ತೀವ್ರ’ ದಿಂದ ‘ತೀವ್ರ’ ಪ್ರಮಾಣಕ್ಕೆ ಇಳಿಕೆಯಾಗಿದೆ. ತನ್ನ ಪ್ರಭಾವ ತಗ್ಗಿಸಿದ ಚಂಡಮಾರುತವು  ರಾಜಸ್ಥಾನಕ್ಕೆ ಚಂಡಮಾರುತ ಅಪ್ಪಳಿಸಲಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 12 ತಂಡಗಳನ್ನು ನಿಯೋಜಿಸಿದ್ದು, ಮೂರು ಹೆಚ್ಚುವರಿ ತಂಡಗಳನ್ನು ಗುಜರಾತ್‌ನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಹೆಚ್ಚುವರಿಯಾಗಿ, 15 ತಂಡಗಳು ಅರ್ರಕೋಣಂ (ತಮಿಳುನಾಡು), ಮುಂಡ್ಲಿ (ಒಡಿಶಾ) ಮತ್ತು ಬಟಿಂಡಾ (ಪಂಜಾಬ್) ನಲ್ಲಿ ತಲಾ ಐದು ತಂಡಗಳನ್ನು ಅಲ್ಪಾವಧಿಯಲ್ಲಿ ಏರ್‌ಲಿಫ್ಟಿಂಗ್‌ಗಾಗಿ ಎಚ್ಚರಿಕೆ ವಹಿಸಲಾಗಿದೆ. ಕೋಸ್ಟ್ ಗಾರ್ಡ್, ಸೇನೆ ಮತ್ತು ನೌಕಾಪಡೆಯ ರಕ್ಷಣಾ ಮತ್ತು ಪರಿಹಾರ ತಂಡಗಳು ಹಡಗುಗಳು ಮತ್ತು ವಿಮಾನಗಳೊಂದಿಗೆ  ಸಿದ್ಧವಾಗಿವೆ.

ಕಳೆದ ಕೆಲವು ದಿನಗಳಲ್ಲಿ ಚಂಡಮಾರುತ ಬಿಪರ್‌ ಜಾಯ್‌ ಕಾರಣದಿಂದ   ಭಾರತ ಮತ್ತು ಪಾಕಿಸ್ತಾನದಲ್ಲಿ 1,80,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

6 minutes ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

19 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

20 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

21 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

22 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

23 hours ago