ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.
ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…