ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.
ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…