ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.
ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…