ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.
ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…