ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.
ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…