ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.
ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…