ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ಅಬ್ಬರ ಜೋರಾಗಿದ್ದು, ಉತ್ತರಭಾರತದ ಹಲವೆಡೆ ಆತಂಕ ಸೃಷ್ಟಿಯಾಗಿದೆ. ಮತ್ತೊಂದೆಡೆ ಚಂಡಮಾರುತದ ಕಾರಣಕ್ಕೆ 67 ರೈಲುಗಳ ಸಂಚಾರ ರದ್ದುಗೊಂಡಿದೆ.
ಗುಜರಾತ್ನ ಸೌರಾಷ್ಟ್ರ ಮತ್ತು ಕಛ್ ಭಾಗದಲ್ಲಿ ಈಗಾಗಲೇ ಚಂಡಮಾರುತ ವ್ಯಾಪಿಸುವ ಕುರಿತು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಜೂ. 15ರ ಸಂಜೆ ಸುಮಾರಿಗೆ ಗುಜರಾತ್ನ ಜಖಾವು ಬಂದರು ಬಳಿ ಅತಿ ತೀವ್ರ ಚಂಡಮಾರುತ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುಜರಾತ್ಗೆ ಜೂ. 15ರಂದು ಅಪ್ಪಳಿಸಲಿರುವ ಬಿಪರ್ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಬಿಪರ್ಜಾಯ್ ಚಂಡಮಾರುತದ ಅಬ್ಬರ ಜೋರಾಗಿರಲಿದ್ದು, ಜೂ. 13ರಿಂದ 15ರ ವರೆಗೆ ಜನರು ಕಡಲತೀರಕ್ಕೆ ಹೋಗಬಾರದು ಎಂದು ಪಾಲ್ಘಾರ್ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ ಆಗಿರುವ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ ಭಾರೀ ಪ್ರಮಾಣದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…