ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಚ್ಯುವಲ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ ನಾಲ್ಕೈದು ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು ಎಂದು ತಿಳಿಸಿದ್ದಾರೆ. ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…