30.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಚಂಡಮಾರುತದ ಮಳೆಯ ಮುನ್ಸೂಚನೆ ಇದೆ. ನಂತರ ಡಿಸೆಂಬರ್ 5 ರ ತನಕ ಚಂಡಮಾರುತದ ಪ್ರಭಾವದಿಂದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. (ಚಂಡಮಾರುತವು ಆಂದ್ರಾ ಕರಾವಳಿಯಿಂದ ಉತ್ತರ ಚಲಿಸುವ ಸಾಧ್ಯತೆಗಳಿಲ್ಲದ್ದರಿಂದ ಹಿಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿಲ್ಲ)
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 30 ರಿಂದ ಡಿಸೆಂಬರ್ 1 ರ ತನಕ ಚಂಡಮಾರುತದ ಮಳೆಯ ಮುನ್ಸೂಚನೆ ಇದ್ದು, ಡಿಸೆಂಬರ್ 5ರ ತನಕ ಅದರ ಪ್ರಭಾವದಿಂದ ಮಳೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಆಂದ್ರಾ ಗಡಿಭಾಗಗಳ ಜಿಲ್ಲೆಗಳಲ್ಲಿ ಡಿಸೆಂಬರ್ 1 ರಂದು ಚಂಡಮಾರುತದ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿಭಾಗಗಳಲ್ಲಿ ನಿರಂತರ ಹನಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 30ರಂದು ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಡಿಸೆಂಬರ್ 2ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ದಿತ್ವಾ ಚಂಡಮಾರುತವು ಡಿಸೆಂಬರ್ 1 ರಂದು ಆಂದ್ರಾ ಕರಾವಳಿ ತೀರದಲ್ಲಿ ದುರ್ಬಲಗೊಂಡು, ಮತ್ತೆ ತಮಿಳುನಾಡು ಕರಾವಳಿಗೆ ಸರಿದು, ಡಿಸೆಂಬರ್ 5ರ ನಂತರ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಹಿಂಗಾರು ಮಾರುತಗಳು ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆಗಳಿಲ್ಲ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…