ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |

December 12, 2022
9:37 PM

ಮ್ಯಾಂಡೋಸ್‌ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು.  ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.

ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್‌15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror