ಮ್ಯಾಂಡೋಸ್ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…