ಮ್ಯಾಂಡೋಸ್ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…