ಮ್ಯಾಂಡೋಸ್ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು. ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…