Advertisement
ಸುದ್ದಿಗಳು

ರಾಜ್ಯಕ್ಕೂ ತಟ್ಟಿದ ಚಂಡಮಾರುತ ಎಫೆಕ್ಟ್‌ | ಕೋಲಾರದಲ್ಲಿ ಕೃಷಿಗೆ ಹಾನಿ | ಬೆಂಗಳೂರಲ್ಲಿ ದಿನವಿಡೀ ಮಳೆ | ಕರಾವಳಿಯಲ್ಲಿ ಅಡಿಕೆ ಬೆಳೆಗಾರರಿಗೆ ತಲೆಬಿಸಿ |

Share

ಮ್ಯಾಂಡೋಸ್‌ ಚಂಡಮಾರುತ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿ ಮುಟ್ಟಿಸಿದೆ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿದಿನವಿಡೀ ಮಳೆ ಇತ್ತು.  ಸಂಜೆಯಾಗುತ್ತಿದ್ದಂತೆಯೇ ಮಳೆಯ ಅಬ್ಬರ ಜೋರಾಗಿದೆ. ಕೋಲಾರದಲ್ಲಿ ಸುರಿದ ಭಾರೀ ಮಳೆಗೆ ಕೃಷಿ ಹಾನಿಯಾಗಿದೆ. ಕರಾವಳಿ ಪ್ರದೇಶದಲ್ಲಿ ತುಂತುರು ಮಳೆಯಾಗಿದ್ದು, ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿದೆ. ಅಡಿಕೆ ಒಣಗಲು ಕಷ್ಟವಾಗಿದೆ. ಕರಾವಳಿಯಲ್ಲಿ ಈಗ ಅಡಿಕೆ ಕೊಯ್ಲಿನ ಸಮಯವಾಗಿದ್ದು, ಕೊಯ್ಲು ಆದ ಅಡಿಕೆ ಅಂಗಳದಲ್ಲಿ ಮಳೆಗೆ ಕೊಳೆಯುತ್ತಿದೆ.

ಬೆಂಗಳೂರಿನಲ್ಲಿ ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಚಳಿಯೂ ಕಾಡುತ್ತಿದೆ. ರಾಜ್ಯದ ವಿವಿಧ ಕಡೆಗಳಲ್ಲೂ ಇದೇ ರೀತಿಯ ವಾತಾವರಣ ಕಂಡುಬಂದಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗಿಂತಲೂ ಬಯಲು ಸೀಮೆಯ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್‌15ರವರೆಗೆ ಮಳೆ ಮುಂದುವರಿಯುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago