ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ಚೆನ್ನೈಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಚೆನ್ನೈನ ಹೆಚ್ಚಿನ ಭಾಗವು ಮುಳುಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ. ಚೆನ್ನೈನಲ್ಲಿ ತಗ್ಗು ಪ್ರದೇಶಗಳಿಂದ ಭಾರೀ ಪ್ರವಾಹ ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಮಂಗಳವಾರ ಬೆಳಿಗ್ಗೆವರೆಗೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಚಂಡಮಾರುತವು ಮಧ್ಯರಾತ್ರಿಯ ಸುಮಾರಿಗೆ ನೆಲ್ಲೂರು ನಡುವೆ ಸಾಗಿಬರುವ ನಿರೀಕ್ಷೆಯಿದೆ.
ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಬೆಳಗ್ಗೆಯಿಂದ ಮಳೆ ನಿರಂತವಾಗಿ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.
ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಮಾಡಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…