ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ಚೆನ್ನೈಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಚೆನ್ನೈನ ಹೆಚ್ಚಿನ ಭಾಗವು ಮುಳುಗಿದೆ. ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ. ಚೆನ್ನೈನಲ್ಲಿ ತಗ್ಗು ಪ್ರದೇಶಗಳಿಂದ ಭಾರೀ ಪ್ರವಾಹ ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಮಂಗಳವಾರ ಬೆಳಿಗ್ಗೆವರೆಗೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಚಂಡಮಾರುತವು ಮಧ್ಯರಾತ್ರಿಯ ಸುಮಾರಿಗೆ ನೆಲ್ಲೂರು ನಡುವೆ ಸಾಗಿಬರುವ ನಿರೀಕ್ಷೆಯಿದೆ.
ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಬೆಳಗ್ಗೆಯಿಂದ ಮಳೆ ನಿರಂತವಾಗಿ ಸುರಿಯುತ್ತಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.
ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವರ್ಗಾವಣೆ ಮಾಡಲಾಗಿದೆ.
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15…
ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…