Advertisement
MIRROR FOCUS

ಮೋಂಥಾ ಚಂಡಮಾರುತ | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Share

ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.  ಮೋಂಥಾ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.  ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ.  ಚಿಕ್ಕಮಗಳೂರು, ಮೂಡಿಗೆರೆ , ತರೀಕೆರೆ ತಾಲೂಕು ಸೇರಿ ಹಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ನಿರಂತರ ಮಳೆಯ ಕಾರಣ ಜಿಲ್ಲೆಯ ಕಾಫಿ, ಅಡಿಕೆ, ತರಕಾರಿ ಬೆಳೆಗಳಿಗೆ ಹಾನಿಯುಂಟಾಗಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಕೆಮ್ಮಣುಗುಂಡಿ, ಮಲ್ಲೇನಹಳ್ಳಿ ಸುತ್ತ ಮುತ್ತಲಿನ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿಗೆ ಕೊಳೆ ರೋಗ ಕಂಡುಬಂದಿದೆ. ಹಲವೆಡೆ ಕಾಫಿ ಕಾಯಿಗಳು ನೆಲಕ್ಕುದುರಿವೆ.

ಮೋಂಥಾ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ.  ಆಂಧ್ರಪ್ರದೇಶದ ಕರಾವಳಿಯ ಕಾಕಿನಾಡದಲ್ಲಿ  ಚಂಡಮಾರುತದ ಕೇಂದ್ರಬಿಂದು ಕಂಡುಬಂದಿದೆ. ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನಲ್ಲಿಯೂ  ಭಾರೀ ಮಳೆ ನಿರೀಕ್ಷಿಸಲಾಗಿದೆ.  ತಮಿಳುನಾಡಿನ  ತಿರುವೆಲ್ಲೂರ್, ಚೆನ್ನೈ, ರಾಣಿಪೆತ್, ಕಂಚೀಪುರಂ, ಚಂಗಲ್ ಪಟ್ಟು,  ವಿಲ್ಲುಪುರಂ ಜಿಲ್ಲೆಗಳಲ್ಲಿ  ಭಾರೀ ಗಾಳಿಯಿಂದಾಗಿ ಮಳೆಯಾಗುವ ನಿರೀಕ್ಷೆ ಇದೆ.   ರಾಜ್ಯದ 11 ಜಿಲ್ಲೆಗಳಲ್ಲಿ  ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಉಡುಪಿ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ . ಬೀದರ್, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.   ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

6 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

6 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

15 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

20 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago