ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೋಂಥಾ ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣವಿದ್ದು ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮೂಡಿಗೆರೆ , ತರೀಕೆರೆ ತಾಲೂಕು ಸೇರಿ ಹಲವೆಡೆ ಸಾಧಾರಣ ಮಳೆ ಮುಂದುವರೆದಿದೆ. ನಿರಂತರ ಮಳೆಯ ಕಾರಣ ಜಿಲ್ಲೆಯ ಕಾಫಿ, ಅಡಿಕೆ, ತರಕಾರಿ ಬೆಳೆಗಳಿಗೆ ಹಾನಿಯುಂಟಾಗಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಕೆಮ್ಮಣುಗುಂಡಿ, ಮಲ್ಲೇನಹಳ್ಳಿ ಸುತ್ತ ಮುತ್ತಲಿನ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿಗೆ ಕೊಳೆ ರೋಗ ಕಂಡುಬಂದಿದೆ. ಹಲವೆಡೆ ಕಾಫಿ ಕಾಯಿಗಳು ನೆಲಕ್ಕುದುರಿವೆ.
ಮೋಂಥಾ ಚಂಡಮಾರುತದ ಅಬ್ಬರ ತೀವ್ರಗೊಂಡಿದೆ. ಆಂಧ್ರಪ್ರದೇಶದ ಕರಾವಳಿಯ ಕಾಕಿನಾಡದಲ್ಲಿ ಚಂಡಮಾರುತದ ಕೇಂದ್ರಬಿಂದು ಕಂಡುಬಂದಿದೆ. ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನಲ್ಲಿಯೂ ಭಾರೀ ಮಳೆ ನಿರೀಕ್ಷಿಸಲಾಗಿದೆ. ತಮಿಳುನಾಡಿನ ತಿರುವೆಲ್ಲೂರ್, ಚೆನ್ನೈ, ರಾಣಿಪೆತ್, ಕಂಚೀಪುರಂ, ಚಂಗಲ್ ಪಟ್ಟು, ವಿಲ್ಲುಪುರಂ ಜಿಲ್ಲೆಗಳಲ್ಲಿ ಭಾರೀ ಗಾಳಿಯಿಂದಾಗಿ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಉಡುಪಿ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ . ಬೀದರ್, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…