ಟೌಕ್ಟೇ ಚಂಡಮಾರುತ | ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಭಾರೀ ಮಳೆ | ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹ | ಕೊರೋನಾ ಭೀತಿಯಿಂದ ಮನೆಯಿಂದ ಹೊರಬರಲು ಜನರಿಗೆ ಭಯ |

May 14, 2021
5:53 PM

ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ  ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.

ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ  ಪರಿಹಾರ ಕೇಂದ್ರವನ್ನು  ತೆರೆದಿದೆ.

ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ  ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ  4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್‌ ಹರಡುವ ಭೀತಿಗೊಂಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror