ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.
ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ ಪರಿಹಾರ ಕೇಂದ್ರವನ್ನು ತೆರೆದಿದೆ.
ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ 4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್ ಹರಡುವ ಭೀತಿಗೊಂಡಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…