ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.
ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ ಪರಿಹಾರ ಕೇಂದ್ರವನ್ನು ತೆರೆದಿದೆ.
ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ 4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್ ಹರಡುವ ಭೀತಿಗೊಂಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…