ಟೌಕ್ಟೇ ಚಂಡಮಾರುತ ಕೇರಳದ ಎರ್ನಾಕುಲಂ ಜಿಲ್ಲೆಯ ಹಲವು ಕಡೆ ಹಾನಿ ಉಂಟು ಮಾಡಿದೆ. ಎರ್ನಾಕುಲಂ ಜಿಲ್ಲೆಯ ಕರಾವಳಿ ತೀರದ ಚೆಲ್ಲಾನಂ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಗುರುವಾರ ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹದ ಭೀತಿ ಎದುರಾದರೂ ಜನರು ರಕ್ಷಣಾ ಕೇಂದ್ರಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಕೊರೋನಾ ಈ ಪ್ರದೇಶದಲ್ಲಿ ವ್ಯಾಪಕವಾಗಿರುವುದರಿಂದ ಇನ್ನಷ್ಟು ಭಯದ ವಾತಾವರಣ ಜನರಲ್ಲಿದೆ.
ಗುರುವಾರ ಬೆಳಗ್ಗಿನಿಂದಲೇ ಚೆಲ್ಲಾನಂ ಪ್ರದೇಶದಲ್ಲಿ ಗಾಳಿ ಹಾಗೂ ಮಳೆಯಾಗುತ್ತಿದೆ. ಹೀಗಾಗಿ ಸಮುದ್ರ ಕೊರತೆ ಉಂಟಾಗಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರ ಮಳೆ ಮತ್ತು ಸಮುದ್ರ ಕೊರೆತದಿಂದಾಗಿ, ಗ್ರಾಮದ ಅನೇಕ ಮನೆಗಳು ನೀರಿನಿಂದ ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಜಿಲ್ಲಾಡಳಿತವು ಸ್ಥಳೀಯ ಶಾಲೆಯಲ್ಲಿ ಪರಿಹಾರ ಕೇಂದ್ರವನ್ನು ತೆರೆದಿದೆ.
ಆದರೆ ಸ್ಥಳೀಯ ಜನರು ಕೊರೋನಾ ಪ್ರಕರಣಗಳಿಂದಾಗಿ ಈ ಕೇಂದ್ರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದಲ್ಲಿ 4000 ಕ್ಕೂ ಅಧಿಕ ಕೊರೋನಾ ಪ್ರಕರಣ ಇರುವುದರಿಂದ ಜನರು ಕೊರೋನಾ ವೈರಸ್ ಹರಡುವ ಭೀತಿಗೊಂಡಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…