ಟೌಕ್ಟೇ ಚಂಡಮಾರುತ | ಕೇರಳದಲ್ಲಿ ಭಾರೀ ಮಳೆ | ಮಂಗಳೂರಿನಲ್ಲೂ ಚಂಡಮಾರುತ ಇಫೆಕ್ಟ್‌ | ಅಲೆಗಳ ಅಬ್ಬರಕ್ಕೆ ಸಮುದ್ರ ಪಾಲಾದ ರುದ್ರಭೂಮಿ |

May 15, 2021
3:09 PM
ಕುಸಿಯುತ್ತಿರುವ ರುದ್ರಭೂಮಿಯ ವಿಡಿಯೋ

ಟೌಕ್ಟೇ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಕೇರಳದ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಮತ್ತು ಕೇಂದ್ರ ಪ್ರದೇಶವಾದ ಲಕ್ಷದ್ವೀಪದಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು  20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದ ಅಲೆಗಳ ಅಬ್ಬರದಿಂದ ಹಲವಾರು ಮನೆಗಳು ಪ್ರವಾಹಕ್ಕೆ ಸಿಲುಕಿದೆ. ಕರಾವಳಿ ತೀರದ  ಜನರನ್ನು ಶುಕ್ರವಾರ ಸುರಕ್ಷತೆಗೆ ಸ್ಥಳಾಂತರಿಸಲಾಗಿದೆ.

ಮಂಗಳೂರು ಪ್ರದೇಶದಲ್ಲೂ ಚಂಡಮಾರುತದ ಪರಿಣಾಮ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶನಿವಾರ ಮಳೆಯಾಗುತ್ತಿದೆ. ಅರಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು ಸಮುದ್ರ ಬದಿಯ ಜನರಿಗೆ ಧ್ವನಿವರ್ಧಕದ ಮೂಲಕ ಎಚ್ಚರಿಕೆಯನ್ನು ಜಿಲ್ಲಾಡಳಿತದ ಮೂಲಕ ನೀಡಲಾಗಿದೆ.
ಮಂಗಳೂರು ತೀರದಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು  ದೈತ್ಯ ಅಲೆಗಳು ಸಮುದ್ರಕ್ಕೆ ಅಪ್ಪಳಿಸುವ ಕಾರಣದಿಂದ  ಮಂಗಳೂರು ಹೊರವಲಯದ ಉಳ್ಳಾಲ,ಕೋಟೆಪುರ,ಸೋಮೇಶ್ವರ  ಪ್ರದೇಶ ದಲ್ಲಿ ಕಡಲ ಕೊರೆತದ ಆತಂಕ ಉಂಟಾಗಿದೆ.  ಏಕಾಏಕಿ ದಡಕ್ಕೆ ಅಪ್ಪಳಿಸುವ ಅಲೆಗಳ ಕಾರಣದಿಂದ ಸೋಮೇಶ್ವರದಲ್ಲಿ  ಹಿಂದೂ ರುದ್ರಭೂಮಿ ಸಮುದ್ರಪಾಲಾಗಿದೆ.
ಚಂಡಮಾರುತದ ಅಬ್ಬರ ಇನ್ನೂ ಹೆಚ್ಚಾಗಿದ್ದು ಸಮುದ್ರ ಕಿನಾರೆಯಿಂದ ಸುಮಾರು 250 ಕಿಮೀ ದೂರದಲ್ಲಿ  ಚಂಡಮಾರುತ ಹಾದುಹೋಗುತ್ತಿದೆ , ಇಂದು ರಾತ್ರಿ ಅಥವಾ ನಾಳೆ ಮಹಾರಾಷ್ಟ್ರ ತಲುಪುವ ಸಾಧ್ಯತೆಯಿದೆ. ಇದು ಪಶ್ಚಿಮ ಕರಾವಳಿಯಿಂದ ದೂರವಿರುವುದರಿಂದ ಕನಿಷ್ಠ ಪರಿಣಾಮ ಬೀರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ, ಮಳೆ ನಿರೀಕ್ಷಿಸಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತವು ಭಾರತದ ಪಶ್ಚಿಮ ಕರಾವಳಿಯಲ್ಲಿ – ಕೇರಳದಿಂದ ಗುಜರಾತ್ ವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror