Advertisement
MIRROR FOCUS

ಟೌಕ್ಟೇ ಚಂಡಮಾರುತ | ಕೇರಳದಲ್ಲಿ ಭಾರೀ ಮಳೆ | ಮಂಗಳೂರಿನಲ್ಲೂ ಚಂಡಮಾರುತ ಇಫೆಕ್ಟ್‌ | ಅಲೆಗಳ ಅಬ್ಬರಕ್ಕೆ ಸಮುದ್ರ ಪಾಲಾದ ರುದ್ರಭೂಮಿ |

Share
ಕುಸಿಯುತ್ತಿರುವ ರುದ್ರಭೂಮಿಯ ವಿಡಿಯೋ

ಟೌಕ್ಟೇ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಕೇರಳದ ವಿವಿದೆಡೆ ಭಾರೀ ಮಳೆಯಾಗುತ್ತಿದೆ. ಕೇರಳದ ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಮತ್ತು ಕೇಂದ್ರ ಪ್ರದೇಶವಾದ ಲಕ್ಷದ್ವೀಪದಲ್ಲಿ ಶನಿವಾರ ರೆಡ್ ಅಲರ್ಟ್ ಘೋಷಣೆಯಾಗಿದ್ದು  20 ಸೆಂ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದ ಅಲೆಗಳ ಅಬ್ಬರದಿಂದ ಹಲವಾರು ಮನೆಗಳು ಪ್ರವಾಹಕ್ಕೆ ಸಿಲುಕಿದೆ. ಕರಾವಳಿ ತೀರದ  ಜನರನ್ನು ಶುಕ್ರವಾರ ಸುರಕ್ಷತೆಗೆ ಸ್ಥಳಾಂತರಿಸಲಾಗಿದೆ.

ಮಂಗಳೂರು ಪ್ರದೇಶದಲ್ಲೂ ಚಂಡಮಾರುತದ ಪರಿಣಾಮ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶನಿವಾರ ಮಳೆಯಾಗುತ್ತಿದೆ. ಅರಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು ಸಮುದ್ರ ಬದಿಯ ಜನರಿಗೆ ಧ್ವನಿವರ್ಧಕದ ಮೂಲಕ ಎಚ್ಚರಿಕೆಯನ್ನು ಜಿಲ್ಲಾಡಳಿತದ ಮೂಲಕ ನೀಡಲಾಗಿದೆ.
ಮಂಗಳೂರು ತೀರದಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು  ದೈತ್ಯ ಅಲೆಗಳು ಸಮುದ್ರಕ್ಕೆ ಅಪ್ಪಳಿಸುವ ಕಾರಣದಿಂದ  ಮಂಗಳೂರು ಹೊರವಲಯದ ಉಳ್ಳಾಲ,ಕೋಟೆಪುರ,ಸೋಮೇಶ್ವರ  ಪ್ರದೇಶ ದಲ್ಲಿ ಕಡಲ ಕೊರೆತದ ಆತಂಕ ಉಂಟಾಗಿದೆ.  ಏಕಾಏಕಿ ದಡಕ್ಕೆ ಅಪ್ಪಳಿಸುವ ಅಲೆಗಳ ಕಾರಣದಿಂದ ಸೋಮೇಶ್ವರದಲ್ಲಿ  ಹಿಂದೂ ರುದ್ರಭೂಮಿ ಸಮುದ್ರಪಾಲಾಗಿದೆ.
ಚಂಡಮಾರುತದ ಅಬ್ಬರ ಇನ್ನೂ ಹೆಚ್ಚಾಗಿದ್ದು ಸಮುದ್ರ ಕಿನಾರೆಯಿಂದ ಸುಮಾರು 250 ಕಿಮೀ ದೂರದಲ್ಲಿ  ಚಂಡಮಾರುತ ಹಾದುಹೋಗುತ್ತಿದೆ , ಇಂದು ರಾತ್ರಿ ಅಥವಾ ನಾಳೆ ಮಹಾರಾಷ್ಟ್ರ ತಲುಪುವ ಸಾಧ್ಯತೆಯಿದೆ. ಇದು ಪಶ್ಚಿಮ ಕರಾವಳಿಯಿಂದ ದೂರವಿರುವುದರಿಂದ ಕನಿಷ್ಠ ಪರಿಣಾಮ ಬೀರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ, ಮಳೆ ನಿರೀಕ್ಷಿಸಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತವು ಭಾರತದ ಪಶ್ಚಿಮ ಕರಾವಳಿಯಲ್ಲಿ – ಕೇರಳದಿಂದ ಗುಜರಾತ್ ವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago