ಟೌಕ್ಟೇ ಚಂಡಮಾರುತ | ಕರಾವಳಿಯಲ್ಲಿ ತೀವ್ರಗೊಂಡ ಚಂಡಮಾರುತದ ಪ್ರಭಾವ | ಪಡುಬಿದ್ರಿಯಲ್ಲಿ ಬೋಟ್‌ ಪಲ್ಟಿ – ಓರ್ವ ಮೃತಪಟ್ಟು, ಐವರು ನಾಪತ್ತೆ |

May 15, 2021
10:05 PM

ಟೌಕ್ಟೇ ಚಂಡಮಾರುತ ತನ್ನ ಪ್ರಭಾವವನ್ನು  ಹೆಚ್ಚಿಸಿದೆ. ಕರಾವಳಿ ಜಿಲ್ಲೆಗಳಲ್ಲಿ  ಚಂಡಮಾರುತದ ಕಾರಣದಿಂದ ಮಳೆಯಾಗುತ್ತಿದೆ. ಚಂಡಮಾರುತದ ಪ್ರಭಾವಕ್ಕೆ ಸಿಕ್ಕಿ ಪಡುಬಿದ್ರಿ ಬಳಿ ಬೋಟ್‌ ಪಲ್ಟಿಯಾಗಿ ಒಬ್ಬ ಮೃತಪಟ್ಟು  5 ಜನ ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ಪಡುಬಿದ್ರಿಯಲ್ಲಿ ನಡೆದಿದೆ.

Advertisement
Advertisement

ಕೇರಳದಲ್ಲಿ  ಭಾರೀ ಅವಾಂತರ ಸೃಷ್ಟಿ ಮಾಡಿದ ಚಂಡಮಾರುತ ಕರಾವಳಿ ಜಿಲ್ಲೆಯಾದ್ಯಂತ ಪ್ರಭಾವ ಉಂಟು ಮಾಡಿದೆ. ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ ಪಾಲಾದ ಬೋಟು ಪಡುಬಿದ್ರಿ ಕಾಡಿಪಟ್ನ ಸಮುದ್ರ ತೀರದಲ್ಲಿ ಬಂದು ದಡಕ್ಕೆ ಅಪ್ಪಳಿಸಿದೆ. ಬೋಟಿನಲ್ಲಿ 8 ಜನರಿದ್ದು 2 ಜನ ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ. ಒಂದು ಮೃತ ದೇಹ ಪತ್ತೆಯಾಗಿದ್ದು, ಕಾಣೆಯಾದ ಐವರಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

 

Advertisement

 

ಚಂಡಮಾರುತವು ಮುಂದಿನ  12  ಗಂಟೆಗಳಲ್ಲಿ  ಇನ್ನೂ ಹೆಚ್ಚಿನ ತೀವ್ರತೆ ಪಡೆಯಲಿದೆ. ಭಾನುವಾರ ವೇಳೆಗೆ ಕರಾವಳಿ ಭಾಗದಲ್ಲೂ ಹೆಚ್ಚಿನ ಗಾಳಿ ಮಳೆಯಾಗಲಿದೆ.  ಮೇ 18 ರ ಸುಮಾರಿಗೆ ಪೋರಬಂದರ್ ಮತ್ತು ನಲಿಯಾ ನಡುವೆ ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಕೇರಳ ಜಿಲ್ಲೆಗಳಲ್ಲಿ ಮತ್ತು ಲಕ್ಷದ್ವೀಪದಲ್ಲಿ ‌ ರೆಡ್‌ ಎಲರ್ಟ್‌ ನೀಡಲಾಗಿದ್ದು , ಮೇ 16 ರಂದು ಕರ್ನಾಟಕ ಕರಾವಳಿ, ಕೊಂಕಣ ಪ್ರದೇಶ ಮತ್ತು ಗೋವಾದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

Advertisement

ಸದ್ಯ ಚಂಡಮಾರುತವು ತೀವ್ರಗೊಂಡಿದ್ದು ಗುಜರಾತ್ ಕರಾವಳಿ ಮತ್ತು ಕೇಂದ್ರ ಪ್ರದೇಶವಾದ ಡಿಯು ಮತ್ತು ದಮನ್ ಮತ್ತು ದಾದ್ರಾ ‌, ಹವೇಲಿ ಕಡೆಗೆ ಸಾಗುತ್ತಿದೆ ಎಂದು ಭಾರತ ಹವಾಮಾನ ಇಲಾಖೆ ಶನಿವಾರ ಸಂಜೆ ತಿಳಿಸಿದೆ.

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!
May 19, 2024
2:16 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |
May 18, 2024
12:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror