ಸುದ್ದಿಗಳು

ಟೌಕ್ಟೇ ಚಂಡಮಾರುತ | ಗುಜರಾತ್‌ ಕರಾವಳಿಗೆ ಅಪ್ಪಳಿಸಿತು ರಣ ಭೀಕರ ಚಂಡಮಾರುತ | 2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಂಡಮಾರುತ ಟೌಕ್ಟೇ ಗುಜರಾತ್‌ ಕರಾವಳಿ ಭಾಗದಲ್ಲಿ  ಅಪ್ಪಳಿಸಿದೆ. ಕಳೆದ  4  ದಿನಗಳಿಂದ ಅರಬೀ ಸಮುದ್ರದ ಕರಾವಳಿ ಭಾಗದಲ್ಲಿ  ಹಾದು ಹೋದ ಟೌಕ್ಟೇ ಚಂಡಮಾರುತ ಅಬ್ಬರದೊಂದಿಗೆ ಗುಜರಾತ್‌ ಕರಾವಳಿ ಭಾಗದಲ್ಲಿ ಅಪ್ಪಳಿಸಿದೆ. ಸುಮಾರು 150  ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಅಬ್ಬರದ ಮಳೆಯೂ ಆರಂಭವಾಗಿದೆ.

Advertisement
Advertisement

ಚಂಡಮಾರುತವು ಗುಜರಾತ್ ಕರಾವಳಿಗೆ ಅಪ್ಪಳಿಸಲು ಆರಂಭವಾಗಿ ಸುಮಾರು 4 ಗಂಟೆಗಳ ಕಾಲ ಅಬ್ಬರವನ್ನು  ಪ್ರದರ್ಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 155-165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಜರಾತ್‌ ದಾಟಿ ಮುಂದೆ ಸಾಗಲಿದೆ ಈ ಸಂದರ್ಭ ತನ್ನ ಪ್ರಭಾವನ್ನು ಕಡಿಮೆ ಮಾಡಬಹುದು. ರಾತ್ರಿಯ ಸಮಯದಲ್ಲಿ ಪೋರಬಂದರ್‌ ಮತ್ತು ಮಹುವಾ ನಡುವೆ  ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ  ಅತ್ಯಂತ ತೀವ್ರವಾದ ಚಂಡಮಾರುತ ಇದಾದ ಕಾರಣ ಗುಜರಾತ್ ಸರ್ಕಾರವು ಕರಾವಳಿ ಪ್ರದೇಶದ 18 ಜಿಲ್ಲೆಗಳಿಂದ 2 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

ಈಗಾಗಲೇ ಗಾಳಿಯ ರಭಸ ಹೆಚ್ಚಿರುವುದರಿಂದ ರಸ್ತೆಗೆ ಮರಗಳು ಉರುಳಿ ಬಿದ್ದಿವೆ. ವಿದ್ಯುತ್‌ ಸಂಪರ್ಕಗಳು ಕಡಿತಗೊಂಡಿವೆ.  ಮೊಬೈಲ್ ನೆಟ್‌ವರ್ಕ್‌ಗಳು ಸ್ಥಗಿತಗೊಂಡಿವೆ.

ಚಂಡಮಾರುತವು ಕೇರಳದಿಂದಲೇ ಅನಾಹುತ ಸೃಷ್ಟಿ ಮಾಡುತ್ತಲೇ ಬಂದಿದ್ದು ಕರ್ನಾಟಕದ ಉಡುಪಿಯ ಪಡುಬಿದ್ರಿ ಬಳಿ ಬೋಟ್‌ ಪಲ್ಟಿಯಾದರೆ ಕರಾವಳಿ ಪೂರ್ತಿ ಸಮುದ್ರ ಕೊರತ ಕಂಡುಬಂದಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ತೀವ್ರ ಚಂಡಮಾರುತಕ್ಕೆ  ಪ್ರತ್ಯೇಕ ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ದೋಣಿಗಳು ಸಮುದ್ರದಲ್ಲಿ ಮುಳುಗಿದ ನಂತರ ಮೂವರು ನಾವಿಕರು ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಗುಜರಾತ್ ಕರಾವಳಿಯ ಕಡೆಗೆ ಹೋಗುವ ಮೊದಲು ಚಂಡಮಾರುತವು ಮುಂಬೈ ನಗರ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಗಾಳಿ ಮತ್ತು ಭಾರೀ ಮಳೆಯಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

4 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

5 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

8 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

9 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

9 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago