Advertisement
ಸುದ್ದಿಗಳು

ಟೌಕ್ಟೇ ಚಂಡಮಾರುತ | ಗುಜರಾತ್‌ ಕರಾವಳಿಗೆ ಅಪ್ಪಳಿಸಿತು ರಣ ಭೀಕರ ಚಂಡಮಾರುತ | 2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಚಂಡಮಾರುತ ಟೌಕ್ಟೇ ಗುಜರಾತ್‌ ಕರಾವಳಿ ಭಾಗದಲ್ಲಿ  ಅಪ್ಪಳಿಸಿದೆ. ಕಳೆದ  4  ದಿನಗಳಿಂದ ಅರಬೀ ಸಮುದ್ರದ ಕರಾವಳಿ ಭಾಗದಲ್ಲಿ  ಹಾದು ಹೋದ ಟೌಕ್ಟೇ ಚಂಡಮಾರುತ ಅಬ್ಬರದೊಂದಿಗೆ ಗುಜರಾತ್‌ ಕರಾವಳಿ ಭಾಗದಲ್ಲಿ ಅಪ್ಪಳಿಸಿದೆ. ಸುಮಾರು 150  ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಅಬ್ಬರದ ಮಳೆಯೂ ಆರಂಭವಾಗಿದೆ.

ಚಂಡಮಾರುತವು ಗುಜರಾತ್ ಕರಾವಳಿಗೆ ಅಪ್ಪಳಿಸಲು ಆರಂಭವಾಗಿ ಸುಮಾರು 4 ಗಂಟೆಗಳ ಕಾಲ ಅಬ್ಬರವನ್ನು  ಪ್ರದರ್ಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 155-165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಜರಾತ್‌ ದಾಟಿ ಮುಂದೆ ಸಾಗಲಿದೆ ಈ ಸಂದರ್ಭ ತನ್ನ ಪ್ರಭಾವನ್ನು ಕಡಿಮೆ ಮಾಡಬಹುದು. ರಾತ್ರಿಯ ಸಮಯದಲ್ಲಿ ಪೋರಬಂದರ್‌ ಮತ್ತು ಮಹುವಾ ನಡುವೆ  ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ  ಅತ್ಯಂತ ತೀವ್ರವಾದ ಚಂಡಮಾರುತ ಇದಾದ ಕಾರಣ ಗುಜರಾತ್ ಸರ್ಕಾರವು ಕರಾವಳಿ ಪ್ರದೇಶದ 18 ಜಿಲ್ಲೆಗಳಿಂದ 2 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

ಈಗಾಗಲೇ ಗಾಳಿಯ ರಭಸ ಹೆಚ್ಚಿರುವುದರಿಂದ ರಸ್ತೆಗೆ ಮರಗಳು ಉರುಳಿ ಬಿದ್ದಿವೆ. ವಿದ್ಯುತ್‌ ಸಂಪರ್ಕಗಳು ಕಡಿತಗೊಂಡಿವೆ.  ಮೊಬೈಲ್ ನೆಟ್‌ವರ್ಕ್‌ಗಳು ಸ್ಥಗಿತಗೊಂಡಿವೆ.

ಚಂಡಮಾರುತವು ಕೇರಳದಿಂದಲೇ ಅನಾಹುತ ಸೃಷ್ಟಿ ಮಾಡುತ್ತಲೇ ಬಂದಿದ್ದು ಕರ್ನಾಟಕದ ಉಡುಪಿಯ ಪಡುಬಿದ್ರಿ ಬಳಿ ಬೋಟ್‌ ಪಲ್ಟಿಯಾದರೆ ಕರಾವಳಿ ಪೂರ್ತಿ ಸಮುದ್ರ ಕೊರತ ಕಂಡುಬಂದಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ತೀವ್ರ ಚಂಡಮಾರುತಕ್ಕೆ  ಪ್ರತ್ಯೇಕ ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ದೋಣಿಗಳು ಸಮುದ್ರದಲ್ಲಿ ಮುಳುಗಿದ ನಂತರ ಮೂವರು ನಾವಿಕರು ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಗುಜರಾತ್ ಕರಾವಳಿಯ ಕಡೆಗೆ ಹೋಗುವ ಮೊದಲು ಚಂಡಮಾರುತವು ಮುಂಬೈ ನಗರ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಗಾಳಿ ಮತ್ತು ಭಾರೀ ಮಳೆಯಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

24 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago