Advertisement
ಸುದ್ದಿಗಳು

ಟೌಕ್ಟೇ ಚಂಡಮಾರುತ | ಗುಜರಾತ್‌ ಕರಾವಳಿಗೆ ಅಪ್ಪಳಿಸಿತು ರಣ ಭೀಕರ ಚಂಡಮಾರುತ | 2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಚಂಡಮಾರುತ ಟೌಕ್ಟೇ ಗುಜರಾತ್‌ ಕರಾವಳಿ ಭಾಗದಲ್ಲಿ  ಅಪ್ಪಳಿಸಿದೆ. ಕಳೆದ  4  ದಿನಗಳಿಂದ ಅರಬೀ ಸಮುದ್ರದ ಕರಾವಳಿ ಭಾಗದಲ್ಲಿ  ಹಾದು ಹೋದ ಟೌಕ್ಟೇ ಚಂಡಮಾರುತ ಅಬ್ಬರದೊಂದಿಗೆ ಗುಜರಾತ್‌ ಕರಾವಳಿ ಭಾಗದಲ್ಲಿ ಅಪ್ಪಳಿಸಿದೆ. ಸುಮಾರು 150  ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಅಬ್ಬರದ ಮಳೆಯೂ ಆರಂಭವಾಗಿದೆ.

ಚಂಡಮಾರುತವು ಗುಜರಾತ್ ಕರಾವಳಿಗೆ ಅಪ್ಪಳಿಸಲು ಆರಂಭವಾಗಿ ಸುಮಾರು 4 ಗಂಟೆಗಳ ಕಾಲ ಅಬ್ಬರವನ್ನು  ಪ್ರದರ್ಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 155-165 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಜರಾತ್‌ ದಾಟಿ ಮುಂದೆ ಸಾಗಲಿದೆ ಈ ಸಂದರ್ಭ ತನ್ನ ಪ್ರಭಾವನ್ನು ಕಡಿಮೆ ಮಾಡಬಹುದು. ರಾತ್ರಿಯ ಸಮಯದಲ್ಲಿ ಪೋರಬಂದರ್‌ ಮತ್ತು ಮಹುವಾ ನಡುವೆ  ಗುಜರಾತ್ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ  ಅತ್ಯಂತ ತೀವ್ರವಾದ ಚಂಡಮಾರುತ ಇದಾದ ಕಾರಣ ಗುಜರಾತ್ ಸರ್ಕಾರವು ಕರಾವಳಿ ಪ್ರದೇಶದ 18 ಜಿಲ್ಲೆಗಳಿಂದ 2 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

ಈಗಾಗಲೇ ಗಾಳಿಯ ರಭಸ ಹೆಚ್ಚಿರುವುದರಿಂದ ರಸ್ತೆಗೆ ಮರಗಳು ಉರುಳಿ ಬಿದ್ದಿವೆ. ವಿದ್ಯುತ್‌ ಸಂಪರ್ಕಗಳು ಕಡಿತಗೊಂಡಿವೆ.  ಮೊಬೈಲ್ ನೆಟ್‌ವರ್ಕ್‌ಗಳು ಸ್ಥಗಿತಗೊಂಡಿವೆ.

ಚಂಡಮಾರುತವು ಕೇರಳದಿಂದಲೇ ಅನಾಹುತ ಸೃಷ್ಟಿ ಮಾಡುತ್ತಲೇ ಬಂದಿದ್ದು ಕರ್ನಾಟಕದ ಉಡುಪಿಯ ಪಡುಬಿದ್ರಿ ಬಳಿ ಬೋಟ್‌ ಪಲ್ಟಿಯಾದರೆ ಕರಾವಳಿ ಪೂರ್ತಿ ಸಮುದ್ರ ಕೊರತ ಕಂಡುಬಂದಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ತೀವ್ರ ಚಂಡಮಾರುತಕ್ಕೆ  ಪ್ರತ್ಯೇಕ ಘಟನೆಗಳಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡು ದೋಣಿಗಳು ಸಮುದ್ರದಲ್ಲಿ ಮುಳುಗಿದ ನಂತರ ಮೂವರು ನಾವಿಕರು ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಗುಜರಾತ್ ಕರಾವಳಿಯ ಕಡೆಗೆ ಹೋಗುವ ಮೊದಲು ಚಂಡಮಾರುತವು ಮುಂಬೈ ನಗರ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ ಗಾಳಿ ಮತ್ತು ಭಾರೀ ಮಳೆಯಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

4 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

4 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

12 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

17 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

18 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

18 hours ago