Advertisement
ಸುದ್ದಿಗಳು

ಬಲಗೊಳ್ಳುತ್ತಿದೆ ಟೌಕ್ಟೇ ಚಂಡಮಾರುತ | ಕರಾವಳಿಯಲ್ಲಿ ಹಾದು ಹೋಗುವ ಚಂಡಮಾರುತ | ಕೇರಳದ 5 ಜಿಲ್ಲೆಗಳಲ್ಲಿ ರೆಡ್‌ ಎಲರ್ಟ್‌ |

Share

ಅರಬೀ ಸಮುದ್ರದಲ್ಲಿ ಎದ್ದಿರುವ  ಟೌಕ್ಟೇ ಚಂಡಮಾರುತವು ಬಲಗೊಳ್ಳುತ್ತಿದೆ. ವಾಯುಭಾರ ಕುಸಿತದ ಪ್ರಮಾಣ ಹೆಚ್ಚಾಗಿದ್ದು ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ 5 ಜಿಲ್ಲೆಗಳಲ್ಲಿ  ಈಗಾಗಲೇ ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದ್ದು ಕೊಟ್ಟಾಯಂ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಈಗಿನ ಪ್ರಕಾರ ಮಹಾರಾಷ್ಟ್ರ, ಗುಜರಾತ್, ಕೇರಳದಲ್ಲಿ ಭಾರಿ ಮಳೆಯಾಗಲಿದ್ದು ಗೋವಾ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಈಗಿನ ಪ್ರಕಾರ ಚಂಡಮಾರುತವು ಭಾರತದ ಕರಾವಳಿ ತೀರದ ಮೂಲಕ ಕರಾಚಿಯ ಕಡೆಗೆ ಹಾದುಹೋಗಲಿದೆ. ಭಾರತದಲ್ಲಿ  ಟೌಕ್ಟೇ ಚಂಡಮಾರುತದ ಪರಿಣಾಮಗಳನ್ನು ನಿಭಾಯಿಸಲು 53 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ ತಂಡಗಳನ್ನು ಮೀಸಲಿರಿಸಲಾಗಿದ್ದು 24 ತಂಡಗಳು ಈಗಾಗಲೇ ಸಜ್ಜಾಗಿವೆ.

 

ಅರಬೀ ಸಮುದ್ರ ಮತ್ತು ಲಕ್ಷದ್ವೀಪಗಳ ನಡುವೆ ರೂಪುಗೊಂಡ ಟೌಕ್ಟೇ ಚಂಡಮಾರುತವು ಭಾನುವಾರ ತೀವ್ರಗೊಳ್ಳಲಿದೆ. ಮಹಾರಾಷ್ಟ್ರ, ಗುಜರಾತ್, ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವಿಕೆಯನ್ನು ಈಗ ಅಂದಾಜಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಪಟ್ಟಂತಿಟ್ಟ , ಆಲಪ್ಪುಳ, ಮತ್ತು ಎರ್ನಾಕುಲಂನಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದ್ದು ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ.

 

ಸೈಕ್ಲೋನಿಕ್‌ ರಚನೆ ಪ್ರಕಾರ ಮುಂದಿನ  12 ಗಂಟೆಗಳಲ್ಲಿ ವಾಯುಭಾರ ಕುಸಿತದ ತೀವ್ರತೆ ಹೆಚ್ಚಾಗುತ್ತದೆ. ಇದು  ಉತ್ತರ-ಈಶಾನ್ಯ ದಿಕ್ಕಿನಲ್ಲಿ ಇಂದು ಸಂಜೆಯವರೆಗೆ ಸಾಗಿ ನಂತರ ಉತ್ತರ-ವಾಯುವ್ಯ ದಿಕ್ಕಿಗೆ ಸಾಗಿ ಮೇ 18 ರ ಬೆಳಿಗ್ಗೆ ಗುಜರಾತ್ ಕರಾವಳಿಯ ಸಮೀಪ ತಲುಪುತ್ತದೆ ಭಾರತೀಯ ಹವಾಮಾನದ ಮಾಹಿತಿ ತಿಳಿಸಿದೆ.

ಕೇರಳದಲ್ಲಿ  ಕೊಟ್ಟಾಯಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಪಾಲಕ್ಕಾಡ್, ಕೋಝಿಕೋಡ್ ಮತ್ತು ವಯನಾಡಗಳಲ್ಲಿ ಆರೆಂಜ್‌ ಎಲರ್ಟ್‌ ಘೋಷಣೆ ಮಾಡಲಾಗಿದ್ದು ತಿರುವನಂತಪುರಂ, ಕೊಲ್ಲಂ, ಪಟ್ಟಂತಿಟ್ಟ , ಆಲಪ್ಪುಳ, ಮತ್ತು ಎರ್ನಾಕುಲಂನಲ್ಲಿ ಶುಕ್ರವಾರ ಭಾರಿ ಮಳೆಯಾಗಲಿದ್ದು ರೆಡ್‌ ಎಲರ್ಟ್‌ ಘೋಷಣೆ ಮಾಡಲಾಗಿದೆ. ಅರಬೀಸಮುದ್ರದ ಮೇಲೆ ಟೌಕ್ಟೇ ಚಂಡಮಾರುತ ಇರುವುದರಿಂದ ಮಹಾರಾಷ್ಟ್ರದ ಸಿಂಧುದುರ್ಗ್ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು  ಮುಂಬೈ, ಗೋವಾ ಮತ್ತು ದಕ್ಷಿಣ ಕೊಂಕಣ ಪ್ರದೇಶದ ಕೆಲವು ಸ್ಥಳಗಳು ಮತ್ತು ಗುಜರಾತ್‌ಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಭಾನುವಾರ ಚಂಡಮಾರುತದ ತೀವ್ರತೆಯ ನಂತರ, ಟೌಕ್ಟೇ ಚಂಡಮಾರುತವು  ಉತ್ತರ-ವಾಯುವ್ಯ ದಿಕ್ಕಿನಲ್ಲಿ ಗುಜರಾತ್ ಮತ್ತು  ಪಾಕಿಸ್ತಾನ ಕರಾವಳಿಗೆ ಚಲಿಸುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ ತೀರ ಹಾಗೂ ಆಸುಪಾಸಿನ ಭಾಗಗಳಲ್ಲೂ ಉತ್ತಮ ಮಳೆಯಾಗಬಹುದು , ಭಾರೀ ಗಾಳಿ ಮಳೆಯ ಬಗ್ಗೆ ಈಗಿನ ಪ್ರಕಾರ ಯಾವುದೇ ಮಾಹಿತಿಗಳಿಲ್ಲ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

26 minutes ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

9 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

10 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

11 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

14 hours ago