ಟೌಕ್ಟೇ ಚಂಡಮಾರುತದ ಬಳಿಕ ಇನ್ನೊಂದು ಚಂಡಮಾರುತದ ಭೀತಿ | ಮೇ.23 ನಂತರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ |

May 18, 2021
8:46 PM

ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ  ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23  ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.

ಅರಬೀ ಸಮುದ್ರದಲ್ಲಿ  ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್‌ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ  ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ  ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.

ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ  ವ್ಯತ್ಯಯವಾಗುವ ಸಾಧ್ಯತೆಯೂ ಇದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror