ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23 ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.
ಅರಬೀ ಸಮುದ್ರದಲ್ಲಿ ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.
ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ ವ್ಯತ್ಯಯವಾಗುವ ಸಾಧ್ಯತೆಯೂ ಇದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…