ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23 ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.
ಅರಬೀ ಸಮುದ್ರದಲ್ಲಿ ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.
ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ ವ್ಯತ್ಯಯವಾಗುವ ಸಾಧ್ಯತೆಯೂ ಇದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…