ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23 ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.
ಅರಬೀ ಸಮುದ್ರದಲ್ಲಿ ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.
ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ ವ್ಯತ್ಯಯವಾಗುವ ಸಾಧ್ಯತೆಯೂ ಇದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…