ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23 ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.
ಅರಬೀ ಸಮುದ್ರದಲ್ಲಿ ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.
ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ ವ್ಯತ್ಯಯವಾಗುವ ಸಾಧ್ಯತೆಯೂ ಇದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…