ಸುದ್ದಿಗಳು

ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ವಿಡಿಯೋ | ಡಿ ವಿ ಸದಾನಂದ ಗೌಡರಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು | ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿ – ಡಿ ವಿ ಸದಾನಂದ ಗೌಡ ಹೇಳಿಕೆ |

Share

ಕೇಂದ್ರದ ಮಾಜಿ ಸಚಿವ ಡಿ. ವಿ ಸದಾನಂದ ಗೌಡ ಅವರನ್ನು ಹೋಲುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್‌ ಆಗುತ್ತಿದ್ದು ಈ ಬಗ್ಗೆ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ  ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ, ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಟ್ವೀಟ್  ಮೂಲಕ ತಿಳಿಸಿದ್ದಾರೆ.

ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಸದಾನಂದ ಗೌಡ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ಮುಖದಂತೆ ಕಾಣುವಂತೆ ಮಾರ್ಫ್ ಮಾಡಲಾಗಿದೆ, ಇದೊಂದು ಕುತಂತ್ರ. ಈ ವಿಡಿಯೋದಲ್ಲಿರುವುದು ನಾನಲ್ಲ ಇಂತಹ ವಿಡಿಯೋಗಳನ್ನು ಯಾವುದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳುವುದು , ಅಪ್ಲೋಡ್, ಫಾರ್ವಡ್ ಮಾಡುವುದು ಶಿಕ್ಷಾರ್ಹವಾಗಿದೆ. ಇಂತಹ ಕೃತ್ಯ ಎಸಗಿದವರ ಬಗ್ಗೆ ನನಗೆ ತಿಳಿಸಿ, ನನ್ನ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸುವುದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|

ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…

32 minutes ago

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

2 hours ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

2 hours ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

3 hours ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ…

3 hours ago