Exclusive - Mirror Hunt

ಶಿವಮಯವಾದ ಜಗವು | ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ ದಾರಿದ್ರ್ಯ- ದುಃಖದಹನ ಶಿವಸ್ತೋತ್ರ | ಇಲ್ಲಿದೆ ಕೇಳಿ ಈ ಸ್ತೋತ್ರ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಶಿವರಾತ್ರಿ. ಈ ದಿನ ಜಗವೆಲ್ಲಾ ಶಿವಮಯವಾಗಿದೆ. ರಾತ್ರಿ ಇಡೀ ಜಾಗರಣೆ ಸಹಿತ ಶಿವಾರ್ಚನೆ ನಡೆಯುತ್ತದೆ. ಈ ಸಂದರ್ಭ ವಸಿಷ್ಠರಿಂದ ರಚಿಸಲ್ಪಟ್ಟ ದಾರಿದ್ರ್ಯ ದುಃಖದಹನ ಶಿವಸ್ತೋತ್ರ ಕೇಳುವುದರಿಂದ ಮತ್ತು ಪಠಿಸುವುದರಿಂದ  ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿಯಾಗುತ್ತದೆ ಎನ್ನುವುದು  ನಂಬಿಕೆ. ಇದೀಗ ಈ ಸ್ತೋತ್ರ ಗಮನ ಸೆಳೆದಿದೆ. ಸತ್ಯನಾರಾಯಣ ಭಟ್ರಕೋಡಿ ಅವರು ಹಾಡಿರುವ ಈ ಸ್ತೋತ್ರ ಶಿವ ಭಕ್ತಿಗೆ ಬೆಳಕಾಗಿದೆ.
ಸತ್ಯನಾರಾಯಣ ಭಟ್ರಕೋಡಿ

ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.

Advertisement
Advertisement

‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.

ಮಾಯೆಯ ಪ್ರಭಾವದಿಂದ ಮಾನವನು ಯಾವುದನ್ನು ಸುಖವೆಂದು ಭ್ರಮಿಸುತ್ತಾನೋ ಮತ್ತು ಅದರ ಪ್ರಾಪ್ತಿಗಾಗಿ ಆತನು ಏನೆಲ್ಲ ವ್ಯವಹಾರಗಳನ್ನು ಮಾಡುತ್ತಾನೋ, ಅವುಗಳ ಮೂಲಕ ಉಂಟಾಗುವ ಕರ್ಮಲೇಪದಿಂದ ದುಃಖ ಮತ್ತು ದಾರಿದ್ರ್ಯಗಳಿಂದ ಪೀಡಿತನಾಗುತ್ತಾನೆ.  ವಸಿಷ್ಠರಿಂದ ರಚಿಸಲ್ಪಟ್ಟ ಈ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ.
ಸರ್ವಪಾಪಗಳಿಂದ ವಿಶುದ್ಧಾತ್ಮರಾಗಿಸಿ, ಶಿವಸಾಯುಜ್ಯವನ್ನು ನೀಡಬಲ್ಲ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ಶಿವರಾತ್ರಿಯ ಉಪಾಸನೆಗೆ ಅತ್ಯಂತ ಪ್ರಶಸ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

6 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

6 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

7 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

15 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

15 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

16 hours ago