Advertisement
Exclusive - Mirror Hunt

ಶಿವಮಯವಾದ ಜಗವು | ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ ದಾರಿದ್ರ್ಯ- ದುಃಖದಹನ ಶಿವಸ್ತೋತ್ರ | ಇಲ್ಲಿದೆ ಕೇಳಿ ಈ ಸ್ತೋತ್ರ…

Share
ಶಿವರಾತ್ರಿ. ಈ ದಿನ ಜಗವೆಲ್ಲಾ ಶಿವಮಯವಾಗಿದೆ. ರಾತ್ರಿ ಇಡೀ ಜಾಗರಣೆ ಸಹಿತ ಶಿವಾರ್ಚನೆ ನಡೆಯುತ್ತದೆ. ಈ ಸಂದರ್ಭ ವಸಿಷ್ಠರಿಂದ ರಚಿಸಲ್ಪಟ್ಟ ದಾರಿದ್ರ್ಯ ದುಃಖದಹನ ಶಿವಸ್ತೋತ್ರ ಕೇಳುವುದರಿಂದ ಮತ್ತು ಪಠಿಸುವುದರಿಂದ  ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿಯಾಗುತ್ತದೆ ಎನ್ನುವುದು  ನಂಬಿಕೆ. ಇದೀಗ ಈ ಸ್ತೋತ್ರ ಗಮನ ಸೆಳೆದಿದೆ. ಸತ್ಯನಾರಾಯಣ ಭಟ್ರಕೋಡಿ ಅವರು ಹಾಡಿರುವ ಈ ಸ್ತೋತ್ರ ಶಿವ ಭಕ್ತಿಗೆ ಬೆಳಕಾಗಿದೆ.
ಸತ್ಯನಾರಾಯಣ ಭಟ್ರಕೋಡಿ

ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.

‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.

ಮಾಯೆಯ ಪ್ರಭಾವದಿಂದ ಮಾನವನು ಯಾವುದನ್ನು ಸುಖವೆಂದು ಭ್ರಮಿಸುತ್ತಾನೋ ಮತ್ತು ಅದರ ಪ್ರಾಪ್ತಿಗಾಗಿ ಆತನು ಏನೆಲ್ಲ ವ್ಯವಹಾರಗಳನ್ನು ಮಾಡುತ್ತಾನೋ, ಅವುಗಳ ಮೂಲಕ ಉಂಟಾಗುವ ಕರ್ಮಲೇಪದಿಂದ ದುಃಖ ಮತ್ತು ದಾರಿದ್ರ್ಯಗಳಿಂದ ಪೀಡಿತನಾಗುತ್ತಾನೆ.  ವಸಿಷ್ಠರಿಂದ ರಚಿಸಲ್ಪಟ್ಟ ಈ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ.
ಸರ್ವಪಾಪಗಳಿಂದ ವಿಶುದ್ಧಾತ್ಮರಾಗಿಸಿ, ಶಿವಸಾಯುಜ್ಯವನ್ನು ನೀಡಬಲ್ಲ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ಶಿವರಾತ್ರಿಯ ಉಪಾಸನೆಗೆ ಅತ್ಯಂತ ಪ್ರಶಸ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

11 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

12 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

18 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago