Advertisement
Exclusive - Mirror Hunt

ಶಿವಮಯವಾದ ಜಗವು | ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ ದಾರಿದ್ರ್ಯ- ದುಃಖದಹನ ಶಿವಸ್ತೋತ್ರ | ಇಲ್ಲಿದೆ ಕೇಳಿ ಈ ಸ್ತೋತ್ರ…

Share
ಶಿವರಾತ್ರಿ. ಈ ದಿನ ಜಗವೆಲ್ಲಾ ಶಿವಮಯವಾಗಿದೆ. ರಾತ್ರಿ ಇಡೀ ಜಾಗರಣೆ ಸಹಿತ ಶಿವಾರ್ಚನೆ ನಡೆಯುತ್ತದೆ. ಈ ಸಂದರ್ಭ ವಸಿಷ್ಠರಿಂದ ರಚಿಸಲ್ಪಟ್ಟ ದಾರಿದ್ರ್ಯ ದುಃಖದಹನ ಶಿವಸ್ತೋತ್ರ ಕೇಳುವುದರಿಂದ ಮತ್ತು ಪಠಿಸುವುದರಿಂದ  ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿಯಾಗುತ್ತದೆ ಎನ್ನುವುದು  ನಂಬಿಕೆ. ಇದೀಗ ಈ ಸ್ತೋತ್ರ ಗಮನ ಸೆಳೆದಿದೆ. ಸತ್ಯನಾರಾಯಣ ಭಟ್ರಕೋಡಿ ಅವರು ಹಾಡಿರುವ ಈ ಸ್ತೋತ್ರ ಶಿವ ಭಕ್ತಿಗೆ ಬೆಳಕಾಗಿದೆ.
ಸತ್ಯನಾರಾಯಣ ಭಟ್ರಕೋಡಿ

ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಯೂ ಬಯಸುವುದು ಆನಂದ ಮತ್ತು ಸುಖವನ್ನು. ಮಾನವನೂ ಅಷ್ಟೆ, ತನ್ನ ಐಹಿಕ ಬದುಕಿಗಾಗಿ ಸಂಪತ್ತನ್ನು ಗಳಿಸುವುದಕ್ಕಾಗಿ ದುಡಿಯುತ್ತಾನಾದರೂ ಆತನ ಅಂತಿಮ ಉದ್ದೇಶ ಆನಂದ ಮತ್ತು ಸುಖಮಯ ಬದುಕು. ಆದರೆ ನಾವು ಗಳಿಸುವ ಆಸ್ತಿ ಅಂತಸ್ತು ಸಂಪತ್ತುಗಳು ನಿಜವಾದ ಸುಖವನ್ನು ನೀಡಲಾರವು. ಈ ಲೌಕಿಕ ಜೀವನದಲ್ಲಿ ನಮ್ಮ ಕರ್ಮಗಳ ಫಲವಾಗಿ ದುಃಖ, ದಾರಿದ್ರ್ಯಗಳು ನಮ್ಮನ್ನು ಅಂಟಿಕೊಳ್ಳುತ್ತವೆ. ಇವುಗಳಿಂದ ಪಾರಾಗಬೇಕಾದರೆ ಪರಮೇಶ್ವನ ಮೊರೆಹೋಗುವುದೊಂದೇ ದಾರಿ.

‘ಶಿವ’ ಎಂದರೆ ಆನಂದ. ಮಹಾಶಿವರಾತ್ರಿಯಂದು ಮುಕ್ತೇಶ್ವರನಾದ ಮಹಾಶಿವನನ್ನು ಪ್ರಾರ್ಥಿಸಿಕೊಂಡರೆ ಕರುಣಾಮಯನಾದ ಮುಕ್ಕಣ್ಣ ನಮ್ಮೆಲ್ಲ ಪಾಪಗಳನ್ನು ಪರಿಹರಿಸಿ, ದುಃಖ ದಾರಿದ್ರ್ಯಗಳಿಂದ ನಮ್ಮನ್ನು ಮುಕ್ತನಾಗಿಸುವನು.

ಮಾಯೆಯ ಪ್ರಭಾವದಿಂದ ಮಾನವನು ಯಾವುದನ್ನು ಸುಖವೆಂದು ಭ್ರಮಿಸುತ್ತಾನೋ ಮತ್ತು ಅದರ ಪ್ರಾಪ್ತಿಗಾಗಿ ಆತನು ಏನೆಲ್ಲ ವ್ಯವಹಾರಗಳನ್ನು ಮಾಡುತ್ತಾನೋ, ಅವುಗಳ ಮೂಲಕ ಉಂಟಾಗುವ ಕರ್ಮಲೇಪದಿಂದ ದುಃಖ ಮತ್ತು ದಾರಿದ್ರ್ಯಗಳಿಂದ ಪೀಡಿತನಾಗುತ್ತಾನೆ.  ವಸಿಷ್ಠರಿಂದ ರಚಿಸಲ್ಪಟ್ಟ ಈ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ದುಃಖ, ದಾರಿದ್ರ್ಯಗಳಿಂದ ಮುಕ್ತನಾಗುವುದಕ್ಕೆ ಸಹಕಾರಿ.
ಸರ್ವಪಾಪಗಳಿಂದ ವಿಶುದ್ಧಾತ್ಮರಾಗಿಸಿ, ಶಿವಸಾಯುಜ್ಯವನ್ನು ನೀಡಬಲ್ಲ ದಾರಿದ್ರ್ಯ ದುಃಖದಹನ ಶಿವಸ್ತೋತ್ರವು ಶಿವರಾತ್ರಿಯ ಉಪಾಸನೆಗೆ ಅತ್ಯಂತ ಪ್ರಶಸ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

5 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

6 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

6 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

12 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

14 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

19 hours ago