ಸುದ್ದಿಗಳು

ದೈಗೋಳಿಯ ಸಾಯಿನಿಕೇತನ ಸೇವಾಶ್ರಮ | ನೂತನ ಪುನರ್ವಸತಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ | ಮಾನವ ಸೇವೆಯೇ ಮಾಧವ ಸೇವೆ – ಎಂ ಪದ್ಮನಾಭ ಪೈ |

Share

ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರು ನೀಡಿದ ಸಂದೇಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿ ಅನುಸರಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯ ‌ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಕರ್ನಾಟಕ ಉತ್ತರದ ರಾಜ್ಯಾಧ್ಯಕ್ಷರಾದ ಎಂ ಪದ್ಮನಾಭ ಪೈ ಅವರು ಹೇಳಿದರು.

ಅವರು ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ನೂತನ ಪುನರ್ವಸತಿ ಕೇಂದ್ರ ದ ಕಟ್ಟಡದ ಶಿಲಾನ್ಯಾಸದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಸಾಯಿ ಸೇವಾ ಪ್ರತಿಷ್ಠಾನ ಈ ಆಶ್ರಮದ ಮೂಲಕ ನಡೆಸುತ್ತಿರುವ ನಿಸ್ವಾರ್ಥ ಸೇವೆ ಅತ್ಯಂತ ‌ಶ್ಲಾಘನೀಯ. 250 ಕ್ಕೂ ಮೀರಿದ ನಿರ್ಗತಿಕ ಮಹಿಳೆಯರಿಗೆ ಆಶ್ರಯ ನೀಡುವ ಈ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸುವುದರ ಮೂಲಕ ಭಗವಂತನ ಕೃಪಾಶೀರ್ವಾದ ಗಳಿಸೋಣ ಎಂದು ವಿವರಿಸಿದರು.

ವೈದಿಕ ವಿದ್ವಾಂಸರಾದ  ವೇದಮೂರ್ತಿ ಬೋಳಂತಕೋಡಿ ರಾಮಭಟ್ಟರು ಶಿಲಾನ್ಯಾಸವನ್ನು ವೇದೋಕ್ತವಾಗಿ ನಡೆಸಿಕೊಟ್ಟು, ಎಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲಿ ಈ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿ ಎಂದು ಆಶೀರ್ವದಿಸಿದರು.
ವಿಶೇಷ ‌ಆಹ್ವಾನಿತರಾಗಿ ಆಗಮಿಸಿದ ಇನ್ಫೋಸಿಸ್ ನ ಮಂಗಳೂರು ವಿಭಾಗದ ಅಧ್ಯಕ್ಷ  ವಾಸುದೇವ ಕಾಮತ್, ಸೇವಾಶ್ರಮದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಮಾಜದಲ್ಲಿ ‌ಮಾನಸಿಕ ರೋಗಗಳಿಂದ ಬೀದಿಗೆ ಬೀಳಲ್ಪಟ್ಟ ರೋಗಿಗಳನ್ನು ತಂದು ಸಲಹಿ ಗುಣಮುಖರನ್ನಾಗಿಸಿ ಪುನಃ ಮನೆಗೆ‌ ಕಳಿಸುವ ವ್ಯವಸ್ಥೆ ಹೊಂದಿದ ಇಂತಹ ಸಂಸ್ಥೆ ಅತಿ ವಿರಳ. ಈ ಕಾರ್ಯಕ್ಕೆ ನಾವೆಲ್ಲರೂ ಭಾಗಿಗಳಾಗೋಣ ಎಂದರು.

ಕಳೆದ ಕೆಲವು ವರ್ಷಗಳಿಂದ ಆಶ್ರಮದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಬೆಂಗಳೂರಿನ ಭಟ್‌ ಬಯೋಟೆಕ್ ಕಂಪೆನಿಯ ಸ್ಥಾಪಕ ನಿರ್ದೇಶಕ ಡಾ|ಶಾಮ ಭಟ್ಟರು ತಮ್ಮ ಒಡನಾಟದ ಅನುಭವವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ತಮ್ಮ ದೇಣಿಗೆಯನ್ನು ಘೋಷಿಸಿದರು.
ಶ್ರೀ ‌ಸತ್ಯಸಾಯಿ ಸೇವಾಸಂಸ್ಥೆಗಳ ಕರ್ನಾಟಕ- ಉತ್ತರದ ಮಹಿಳಾ ಸೇವಾ ಸಂಯೋಜಕಿ  ಪ್ರಿಯಾ ಪಿ ಪೈ, ದ.ಕ. ಜಿಲ್ಲಾಧ್ಯಕ್ಷರಾದ  ಪ್ರಸನ್ನ ಭಟ್ ಬಲ್ನಾಡು, ಕಾಸರಗೋಡು ಜಿಲ್ಲಾಧ್ಯಕ್ಷರಾದ  ಹಿರಣ್ಯ ಮಹಾಲಿಂಗ ಭಟ್ , ಕಾಂಪ್ಕೋದ ನಿರ್ದೇಶಕ ಡಾ ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ವಿಶೇಷ ಅತಿಥಿಗಳಾಗಿದ್ದು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಸೇವಾರೂಪದಲ್ಲಿ ನೂತನ ಕಟ್ಟಡದ. ನಕ್ಷೆ ನಿರ್ಮಿಸಿದ ಇಂಜಿನಿಯರ್  ‌ಪೂರ್ಣಿಮಾ ಅವರನ್ನು ಗೌರವಿಸಲಾಯಿತು. ಆಶ್ರಮದ ನಿವಾಸಿ  ‌ರೇಖಾ ಪ್ರಭು ಪ್ರಾರ್ಥನೆ ಮಾಡಿದರು. ಡಾ ಶಾರದಾ ಸ್ವಾಗತಿಸಿ  ಡಾ ಉದಯಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಮೈ ಸುಬ್ರಹ್ಮಣ್ಯ ಭಟ್ ವಂದನಾರ್ಪಣೆಗೈದರು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

7 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

7 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

22 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

22 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

22 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

22 hours ago