Advertisement
ಸುದ್ದಿಗಳು

ದೈಗೋಳಿಯ ಸಾಯಿನಿಕೇತನ ಸೇವಾಶ್ರಮ | ನೂತನ ಪುನರ್ವಸತಿ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ | ಮಾನವ ಸೇವೆಯೇ ಮಾಧವ ಸೇವೆ – ಎಂ ಪದ್ಮನಾಭ ಪೈ |

Share

ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರು ನೀಡಿದ ಸಂದೇಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿ ಅನುಸರಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯ ‌ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಕರ್ನಾಟಕ ಉತ್ತರದ ರಾಜ್ಯಾಧ್ಯಕ್ಷರಾದ ಎಂ ಪದ್ಮನಾಭ ಪೈ ಅವರು ಹೇಳಿದರು.

Advertisement
Advertisement

ಅವರು ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ನೂತನ ಪುನರ್ವಸತಿ ಕೇಂದ್ರ ದ ಕಟ್ಟಡದ ಶಿಲಾನ್ಯಾಸದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಸಾಯಿ ಸೇವಾ ಪ್ರತಿಷ್ಠಾನ ಈ ಆಶ್ರಮದ ಮೂಲಕ ನಡೆಸುತ್ತಿರುವ ನಿಸ್ವಾರ್ಥ ಸೇವೆ ಅತ್ಯಂತ ‌ಶ್ಲಾಘನೀಯ. 250 ಕ್ಕೂ ಮೀರಿದ ನಿರ್ಗತಿಕ ಮಹಿಳೆಯರಿಗೆ ಆಶ್ರಯ ನೀಡುವ ಈ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸುವುದರ ಮೂಲಕ ಭಗವಂತನ ಕೃಪಾಶೀರ್ವಾದ ಗಳಿಸೋಣ ಎಂದು ವಿವರಿಸಿದರು.

ವೈದಿಕ ವಿದ್ವಾಂಸರಾದ  ವೇದಮೂರ್ತಿ ಬೋಳಂತಕೋಡಿ ರಾಮಭಟ್ಟರು ಶಿಲಾನ್ಯಾಸವನ್ನು ವೇದೋಕ್ತವಾಗಿ ನಡೆಸಿಕೊಟ್ಟು, ಎಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲಿ ಈ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿ ಎಂದು ಆಶೀರ್ವದಿಸಿದರು.
ವಿಶೇಷ ‌ಆಹ್ವಾನಿತರಾಗಿ ಆಗಮಿಸಿದ ಇನ್ಫೋಸಿಸ್ ನ ಮಂಗಳೂರು ವಿಭಾಗದ ಅಧ್ಯಕ್ಷ  ವಾಸುದೇವ ಕಾಮತ್, ಸೇವಾಶ್ರಮದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಮಾಜದಲ್ಲಿ ‌ಮಾನಸಿಕ ರೋಗಗಳಿಂದ ಬೀದಿಗೆ ಬೀಳಲ್ಪಟ್ಟ ರೋಗಿಗಳನ್ನು ತಂದು ಸಲಹಿ ಗುಣಮುಖರನ್ನಾಗಿಸಿ ಪುನಃ ಮನೆಗೆ‌ ಕಳಿಸುವ ವ್ಯವಸ್ಥೆ ಹೊಂದಿದ ಇಂತಹ ಸಂಸ್ಥೆ ಅತಿ ವಿರಳ. ಈ ಕಾರ್ಯಕ್ಕೆ ನಾವೆಲ್ಲರೂ ಭಾಗಿಗಳಾಗೋಣ ಎಂದರು.

ಕಳೆದ ಕೆಲವು ವರ್ಷಗಳಿಂದ ಆಶ್ರಮದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಬೆಂಗಳೂರಿನ ಭಟ್‌ ಬಯೋಟೆಕ್ ಕಂಪೆನಿಯ ಸ್ಥಾಪಕ ನಿರ್ದೇಶಕ ಡಾ|ಶಾಮ ಭಟ್ಟರು ತಮ್ಮ ಒಡನಾಟದ ಅನುಭವವನ್ನು ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ತಮ್ಮ ದೇಣಿಗೆಯನ್ನು ಘೋಷಿಸಿದರು.
ಶ್ರೀ ‌ಸತ್ಯಸಾಯಿ ಸೇವಾಸಂಸ್ಥೆಗಳ ಕರ್ನಾಟಕ- ಉತ್ತರದ ಮಹಿಳಾ ಸೇವಾ ಸಂಯೋಜಕಿ  ಪ್ರಿಯಾ ಪಿ ಪೈ, ದ.ಕ. ಜಿಲ್ಲಾಧ್ಯಕ್ಷರಾದ  ಪ್ರಸನ್ನ ಭಟ್ ಬಲ್ನಾಡು, ಕಾಸರಗೋಡು ಜಿಲ್ಲಾಧ್ಯಕ್ಷರಾದ  ಹಿರಣ್ಯ ಮಹಾಲಿಂಗ ಭಟ್ , ಕಾಂಪ್ಕೋದ ನಿರ್ದೇಶಕ ಡಾ ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ವಿಶೇಷ ಅತಿಥಿಗಳಾಗಿದ್ದು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ಸೇವಾರೂಪದಲ್ಲಿ ನೂತನ ಕಟ್ಟಡದ. ನಕ್ಷೆ ನಿರ್ಮಿಸಿದ ಇಂಜಿನಿಯರ್  ‌ಪೂರ್ಣಿಮಾ ಅವರನ್ನು ಗೌರವಿಸಲಾಯಿತು. ಆಶ್ರಮದ ನಿವಾಸಿ  ‌ರೇಖಾ ಪ್ರಭು ಪ್ರಾರ್ಥನೆ ಮಾಡಿದರು. ಡಾ ಶಾರದಾ ಸ್ವಾಗತಿಸಿ  ಡಾ ಉದಯಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಮೈ ಸುಬ್ರಹ್ಮಣ್ಯ ಭಟ್ ವಂದನಾರ್ಪಣೆಗೈದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

17 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

17 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago