ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರು ನೀಡಿದ ಸಂದೇಶವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿ ಅನುಸರಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು ಸಾಧ್ಯ ಎಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಕರ್ನಾಟಕ ಉತ್ತರದ ರಾಜ್ಯಾಧ್ಯಕ್ಷರಾದ ಎಂ ಪದ್ಮನಾಭ ಪೈ ಅವರು ಹೇಳಿದರು.
ಅವರು ದೈಗೋಳಿಯ ಸಾಯಿನಿಕೇತನ ಸೇವಾಶ್ರಮದ ನೂತನ ಪುನರ್ವಸತಿ ಕೇಂದ್ರ ದ ಕಟ್ಟಡದ ಶಿಲಾನ್ಯಾಸದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶ್ರೀ ಸಾಯಿ ಸೇವಾ ಪ್ರತಿಷ್ಠಾನ ಈ ಆಶ್ರಮದ ಮೂಲಕ ನಡೆಸುತ್ತಿರುವ ನಿಸ್ವಾರ್ಥ ಸೇವೆ ಅತ್ಯಂತ ಶ್ಲಾಘನೀಯ. 250 ಕ್ಕೂ ಮೀರಿದ ನಿರ್ಗತಿಕ ಮಹಿಳೆಯರಿಗೆ ಆಶ್ರಯ ನೀಡುವ ಈ ನೂತನ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸುವುದರ ಮೂಲಕ ಭಗವಂತನ ಕೃಪಾಶೀರ್ವಾದ ಗಳಿಸೋಣ ಎಂದು ವಿವರಿಸಿದರು.
ವೈದಿಕ ವಿದ್ವಾಂಸರಾದ ವೇದಮೂರ್ತಿ ಬೋಳಂತಕೋಡಿ ರಾಮಭಟ್ಟರು ಶಿಲಾನ್ಯಾಸವನ್ನು ವೇದೋಕ್ತವಾಗಿ ನಡೆಸಿಕೊಟ್ಟು, ಎಲ್ಲರ ಸಹಕಾರದಿಂದ ಅತಿ ಶೀಘ್ರದಲ್ಲಿ ಈ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿ ಎಂದು ಆಶೀರ್ವದಿಸಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಇನ್ಫೋಸಿಸ್ ನ ಮಂಗಳೂರು ವಿಭಾಗದ ಅಧ್ಯಕ್ಷ ವಾಸುದೇವ ಕಾಮತ್, ಸೇವಾಶ್ರಮದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಮಾಜದಲ್ಲಿ ಮಾನಸಿಕ ರೋಗಗಳಿಂದ ಬೀದಿಗೆ ಬೀಳಲ್ಪಟ್ಟ ರೋಗಿಗಳನ್ನು ತಂದು ಸಲಹಿ ಗುಣಮುಖರನ್ನಾಗಿಸಿ ಪುನಃ ಮನೆಗೆ ಕಳಿಸುವ ವ್ಯವಸ್ಥೆ ಹೊಂದಿದ ಇಂತಹ ಸಂಸ್ಥೆ ಅತಿ ವಿರಳ. ಈ ಕಾರ್ಯಕ್ಕೆ ನಾವೆಲ್ಲರೂ ಭಾಗಿಗಳಾಗೋಣ ಎಂದರು.ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…